ಬಿಹಾರ್ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಕುರಿತಂತೆ ಮೋದಿ ನೀಡಿರುವ ಹೇಳಿಕೆಯ ಬಗ್ಗೆ ವಾಗ್ದಾಳಿ ನಡೆಸಿದ ಬಿಹಾರ್ ಸಿಎಂ ನಿತೀಶ್ ಕುಮಾರ್, ತಮ್ಮ ಅಧಿಕಾರವಧಿಯಲ್ಲಿ ಜಿಡಿಪಿ ಮತ್ತು ಸೆನ್ಸೆಕ್ಸ್ ಕುಸಿತದಿಂದ ಆತಂಕಗೊಂಡು ಆ ರೀತಿ ಹೇಳಿಕೆ ನೀಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಸರಕಾರ 1.25 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ನೀಡುವುದಾಗಿ ಘೋಷಿಸಿದೆ. ಒಟ್ಟು ಕೇಂದ್ರದಿಂದ 3.75 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ನೆರವು ದೊರೆಯಲಿದೆ. ಆದರೆ, ನಿತೀಶ್ ಕೇವಲ 2.7 ಲಕ್ಷ ಕೋಟಿ ರೂಪಾಯಿಗಳ ಬಗ್ಗೆ ಮಾತನಾಡುತ್ತಾರೆ. ಉಳಿದ 1.76 ಲಕ್ಷ ಕೋಟಿ ರೂಪಾಯಿಗಳು ಮೇವು ಹಗರಣದಂತೆ ಭ್ರಷ್ಟಾಚಾರದಲ್ಲಿ ಮುಳಗಲಿವೆಯೇ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.