ನಿತೀಶ್ ಕುಮಾರ್, ರಾಜ್ಯಪಾಲ ರಾಮನಾಥ್ ಕೋವಿಂದ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ನವನ್ನು ಸಲ್ಲಿಸಿದ್ದಾರೆ ಮತ್ತು ಸಂಪುಟದ ನಿರ್ಧಾರವನ್ನು ಅವರಿಗೆ ತಿಳಿಸಿದ್ದಾರೆ", ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜೀನಾಮೆಯನ್ನು ಸ್ವೀಕರಿಸಿರುವ ರಾಜ್ಯಪಾಲರು, ಮುಂದಿನ ಸರ್ಕಾರ ರಚನೆಯಾಗುವವರೆಗೆ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯಲು ನಿತೀಶ್ ಅವರಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಮಹಾಮೈತ್ರಿಕೂಟದ ನೇತೃತ್ವ ವಹಿಸಿದ್ದ ನಿತೀಶ್ ಕುಮಾರ್ ಅವರ ಜೆಡಿಯು, ಮಿತ್ರ ಪಕ್ಷಗಳಾದ ಆರ್ಜೆಡಿ ಮತ್ತು ಕಾಂಗ್ರೆಸ್ ಜೊತೆ ಸಭೆ ನಡೆಸಿದ ಬಳಿಕ ನೂತನ ಸರ್ಕಾರವನ್ನು ರಚಿಸುವ ಪ್ರಸ್ತಾವನೆಯನ್ನು ಮುಂದಿಡಲಿದ್ದಾರೆ.