ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ಸಾಮಾಜಿಕ ನ್ಯಾಯ ಪ್ರಶಸ್ತಿ

ಶುಕ್ರವಾರ, 29 ಜನವರಿ 2016 (20:23 IST)
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಅಮೆರಿಕ ಮೂಲದ ಪೆರಿಯಾರ್ ಇಂಟರ್‌ನ್ಯಾಷನಲ್ ಸಂಸ್ಥೆ ಕೆ.ವೀರಮಣಿ ಸಾಮಾಜಿಕ ನ್ಯಾಯ ಪ್ರಶಸ್ತಿಗೆ ಆಯ್ಕೆ ಮಾಡಿದೆ. 
 
ದಿವಂಗತ ಪ್ರಧಾನಿ ವಿ.ಪಿ.ಸಿಂಗ್,ಎಂ.ಕರುಣಾನಿಧಿ, ಸೀಕಾರಾಮ್ ಕೇಸರಿ ಮತ್ತು ಮಾಯಾವತಿಯವರಿಗೆ ದೊರೆತಂತಹ ಸಾಮಾಜಿಕ ನ್ಯಾಯ ಪ್ರಶಸ್ತಿ  ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಅತಿ ಶ್ರೇಷ್ಠ ಗೌರವ ದೊರೆತಂತಾಗಿದೆ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ.ಸಿ ತ್ಯಾಗಿ ಸಂತಸ ವ್ಯಕ್ತಪಡಿಸಿದ್ದಾರೆ. 
 
ಕಾಂಗ್ರೆಸ್ ಸಂಸದ ವಿ.ಹನುಮಂತ್ ರಾವ್ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಛಗನ್ ಭುಜಬಲ್‌ ಅವರಿಗೆ ಕೂಡಾ ಸಾಮಾಜಿಕ ನ್ಯಾಯ ಪ್ರಶಸ್ತಿ ದೊರೆತಿದ್ದು, ಪ್ರಶಸ್ತಿ ಪಡೆದವರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುತ್ತಿದೆ.  
 
ಸಮಾಜದ ಶೋಷಿತರು ಮತ್ತು ಹಿಂದುಳಿದ ವರ್ಗದವರಿಗೆ ಕೂಡಾ ನಿತೀಶ್ ಅವರಿಗೆ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.
 
ಪಾಟ್ನಾದಲ್ಲಿ ನಿತೀಶ್ ಕುಮಾರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲು ಪ್ರಶಸ್ತಿ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ತ್ಯಾಗಿ ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ