ಕೇಂದ್ರ ಸಚಿವರು, ಬಿಜೆಪಿ ಮುಖಂಡರ ವಿರುದ್ಧದ ಕ್ರಿಮಿನಲ್ ಕೇಸ್ಗಳ ತನಿಖೆಗೆ ತಿಲಾಂಜಲಿ: ಆಪ್
ಬುಧವಾರ, 27 ಜುಲೈ 2016 (18:40 IST)
ಕೇಂದ್ರ ಸರಕಾರದಲ್ಲಿರುವ ಸಚಿವರು ಮತ್ತು ಬಿಜೆಪಿ ಸಂಸದರ ವಿರುದ್ಧ ಕ್ರಿಮಿನಲ್ ಕೇಸ್ಗಳಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಸರಕಾರ, ಎಲ್ಲಾ ತನಿಖಾ ಏಜೆನ್ಸಿಗಳನ್ನು ಆಮ್ ಆದ್ಮಿ ಪಕ್ಷದ ಮುಖಂಡರ ವಿರುದ್ಧ ಪ್ರಯೋಗಿಸುತ್ತಿದೆ ಎಂದು ಆರೋಪಿಸಲಾಗಿದೆ.
ಕೇಂದ್ರದ 75 ಸಚಿವರಲ್ಲಿ 24 ಸಚಿವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ 14 ಸಚಿವರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಆದಾಗ್ಯೂ ಪೊಲೀಸರು ಮತ್ತು ಸಿಬಿಐ ಅಂತಪ ಕ್ರಿಮಿನಲ್ ರಾಜಕಾರಣಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳಲು ಮುಂದಾಗುತ್ತಿಲ್ಲ ಎಂದು ಆಪ್ ವಕ್ತಾರ ರಾಘವ್ ಚಡ್ಡಾ ಹೇಳಿದ್ದಾರೆ.
ಅದಕ್ಕಿಂತ ಹೆಚ್ಚಾಗಿ 282 ಬಿಜೆಪಿ ಲೋಕಸಭಾ ಸಂಸದರಲ್ಲಿ 98 ಸಂಸದರು ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದಾರೆ. ದೇಶದ ಯಾವುದೇ ತನಿಖಾ ಸಂಸ್ಥೆಗಳು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ಮೌನವಹಿಸಿವೆ. ಆದರೆ, ಆಪ್ ಶಾಸಕರು ಮತ್ತು ನಾಯಕರ ವಿರುದ್ಧ ಸಮರ ಸಾರಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಂ.ಎಂ.ಖಾನ್ ಹತ್ಯೆಯಲ್ಲಿ ನವದೆಹಲಿಯ ನಗರಸಭೆಯ ಉಪಾಧ್ಯಕ್ಷ ಕರಣ್ ಸಿಂಗ್ ತನ್ವರ್ ಕೈವಾಡವಿದೆ ಎಂದು ಆಮ್ ಆದ್ಮಿ ಪಕ್ಷ ಸಾಕ್ಷ್ಯಗಳನ್ನು ನೀಡಿದ್ದರೂ ದೆಹಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಪ್ ಮುಖಂಡ ರಾಘವ್ ಚಟ್ಟಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.