ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇಲ್ಲ!
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ಉದ್ಯೋಗಾಕಾಂಕ್ಷಿಗಳು ಯೋಜನೆ ವಿರೋಧಿಸಿ ನಾವು ಯಾವುದೇ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿಲ್ಲ ಎಂಬುದನ್ನು ನಮಗೆ ಸಾಬೀತುಪಡಿಸಬೇಕು.
ಅಂತಹವರನ್ನು ಮಾತ್ರ ನಾವು ಪರಿಗಣಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಭಾರತದಲ್ಲಿರುವಷ್ಟು ಜನಸಂಖ್ಯಾ ಲಾಭಾಂಶವನ್ನು ಜಗತ್ತಿನ ಯಾವುದೇ ದೇಶ ಹೊಂದಿಲ್ಲ. 50 ರಷ್ಟು ಯುವಕರು 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರು.
ಸೇನೆಯು ಇದರ ಸದುಪಯೋಗ ಪಡೆದುಕೊಳ್ಳಬೇಕು. ನಾವು ಈ ಜನಸಂಖ್ಯಾ ಲಾಭಾಂಶವನ್ನು ಪ್ರತಿಬಿಂಬಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.