ಬಿಜೆಪಿಯ ಹಿಂದುತ್ವ ಪ್ರಯೋಗಶಾಲೆ ಎಂದು ಆಗಾಗ್ಗೆ ಉಲ್ಲೇಖಿಸುವ ಗುಜರಾತಿನಲ್ಲಿ ಬಹುಶಃ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಸಮರ್ಥ ಮುಖ್ಯಮಂತ್ರಿ ಅಭ್ಯರ್ಥಿ ಯಾರೂ ಸಿಕ್ಕಿಲ್ಲವೆಂದು ಕಾಣುತ್ತದೆ. ಹೀಗಾಗಿ ಶೀಲಾ ದೀಕ್ಷಿತ್ ಅವರನ್ನು ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿರುವ ಕಾಂಗ್ರೆಸ್ ಪಕ್ಷ ಗುಜರಾತಿನ ವಿಷಯದಲ್ಲಿ ಮಾತ್ರ ಮೌನ ತಾಳಿದೆ.
ಗುಜರಾತ್ ಪ್ರಧಾನಮಂತ್ರಿ ಮೋದಿಯ ತವರು ರಾಜ್ಯವಾಗಿದ್ದು, ಗುಜರಾತಿನಲ್ಲಿ ರಾಜ್ಯ ನಾಯಕರು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿಲ್ಲಿಸಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿದೆ. ಕಾಂಗ್ರೆಸ್ 1989ರಿಂದ ಗುಜರಾತಿನಲ್ಲಿ ಅಧಿಕಾರದಿಂದ ಹೊರಗಿದೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಅನೇಕ ಆಕಾಂಕ್ಷಿಗಳಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ಉಳಿದ ಆಕಾಂಕ್ಷಿಗಳಿಗೆ ಅಸಮಾಧಾನವಾಗಿ ಚುನಾವಣೆಗೆ ಸಹಕರಿಸದೇ ಇರಬಹುದು ಎಂಬ ಆತಂಕ ಕಾಂಗ್ರೆಸ್ ಪಕ್ಷವನ್ನು ಕಾಡಿದೆ.