ಕಳೆದ ಮೇ 28 ರಂದು ಹದಿವಯಸ್ಸಿನ ಸಹೋದರಿಯರಿಬ್ಬರು ತಮ್ಮ ಮನೆಯ ಹಿಂದುಗಡೆ ಮಾವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರಿಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂಬ ಸಂಶಯ ವ್ಯಕ್ತವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ಐವರನ್ನು ಬಂಧಿಸಲಾಗಿತ್ತು. ಈ ಘಟನೆ ದೇಶ, ವಿದೇಶಗಳಲ್ಲಿ ಖಂಡನೆಗೆ ಗುರಿಯಾಗಿತ್ತು. ದೇಶದ ಹಿರಿಯ ನಾಯಕರು ಗ್ರಾಮಕ್ಕೆ ಭೇಟಿ ನೀಡಿ ಬಾಲಕಿಯರ ಮರಣಕ್ಕೆ ಸಂತಾಪ ವ್ಯಕ್ತಪಡಿಸಿದ್ದರು.
ಈ ಎಲ್ಲ ಗೊಂದಲಗಳು ಮತ್ತು ಎಲ್ಲ ಕಡೆಯಿಂದ ಬಂದ ಒತ್ತಡ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಲು ಪ್ರೇರೇಪಿಸಿತ್ತು. ಸತತ 5 ತಿಂಗಳು ಈ ಕುರಿತು ತನಿಖೆ ನಡೆಸಿದ ಸಿಬಿಐ ಇದೊಂದು ಕೊಲೆ ಎನ್ನಲು ಸಾಕ್ಷ್ಯಾಧಾರಗಳಿಲ್ಲ ,ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ನೀಡಿದೆ.