ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರಾಜೀನಾಮೆ ನೀಡಲೇಬೇಕು ಎನ್ನುವ ವಿಪಕ್ಷಗಳ ನಿಲುವಿನ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ ಮುಕ್ತಾರ್ ಅಬ್ಬಾಸ್ ನಕ್ವಿ, ಕೇಂದ್ರ ಸರಕಾರ ನಿಮ್ಮನ್ನು ಓಲೈಸಲು ಕಾರ್ಯನಿರ್ವಹಿಸುತ್ತಿಲ್ಲ. ಅಭಿವೃದ್ಧಿಗಾಗಿ ಕಾರ್ಯ.ನಿರ್ವಹಿಸುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿಯ ಮೂವರು ನಾಯಕರು ರಾಜೀನಾಮೆ ನೀಡುವವರೆಗೆ ಚರ್ಚೆಯಿಲ್ಲ. ರಾಜೀನಾಮೆ ನೀಡಿ ಚರ್ಚೆಗೆ ಬನ್ನಿ ಎಂದು ಕಾಂಗ್ರೆಸ್ ನೇತೃತ್ವ ವಿಪಕ್ಷಗಳು ಸಂಸತ್ತಿನಲ್ಲಿ ಘೋಷಣೆಗಳನ್ನು ಕೂಗಿದಾಗ, ನಕ್ವಿ ಮಾತನಾಡಿ, ಚರ್ಚೆಗೆ ನಾವು ಸಿದ್ದರಿದ್ದೇವೆ,.ಚರ್ಚೆಯಿಂದ ಪಾರಾಗಲು ಯತ್ನಿಸಬೇಡಿ. ಕೇವಲ ಪೊಳ್ಳು ವರದಿಗಳ ಆಧಾರದ ಮೇಲೆ ಯಾರು ರಾಜೀನಾಮೆ ನೀಡಲು ಸಾಧ್ಯವಿಲ್ಲ ಎಂದರು.