ಭಾರತ ನೊಂದಷ್ಟು ಬೇರಾವ ದೇಶವೂ ನೊಂದಿಲ್ಲ: ಜೈಶಂಕರ್

ಶನಿವಾರ, 31 ಡಿಸೆಂಬರ್ 2022 (09:32 IST)
ನವದೆಹಲಿ : ನಾವು ನಮ್ಮ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನೇ ಬಯಸುತ್ತೇವೆ. ಆದರೆ ಇದರ ಅರ್ಥ ಭಯೋತ್ಪಾದನೆಯನ್ನು ಕ್ಷಮಿಸುತ್ತೇವೆ ಎಂದಲ್ಲ.

ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವ ದೇಶವೂ ನೊಂದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿಕೆ ನೀಡಿದ್ದಾರೆ.

ಶುಕ್ರವಾರ ಜೈಶಂಕರ್ ಅವರು ಸೈಪ್ರಸ್ಗೆ ಭೇಟಿ ನೀಡಿದ್ದು, ಅಲ್ಲಿನ ಭಾಷಣದ ವೇಳೆ ಅವರು ನೆರೆಯ ಪಾಕಿಸ್ತಾನ ಹಾಗೂ ಚೀನಾ ದೇಶಗಳಿಗೆ ತಿರುಗೇಟು ನಿಡಿದ್ದಾರೆ.

ನಮ್ಮ ನೆರೆಯ ದೇಶಗಳೊಂದಿಗೆ ಒಳ್ಳೆಯ ಸಂಬಂಧ ಬಯಸಿದರೂ ನಮ್ಮ ಮೇಲಾಗಿರುವ ಭಯೋತ್ಪಾದನೆಯನ್ನು ನಾವು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಈ ವಿಷಯದ ಬಗ್ಗೆ ಯಾವುದೇ ರಾಜಿಯಿಲ್ಲ ಎಂದು ಒತ್ತಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ