ಜನತಾ ಪರಿವಾರದ ಮಂಡಲ್ ರಾಜಕೀಯಕ್ಕೆ ತಿರುಗೇಟು ನೀಡಲು ಸಿದ್ದತೆ ನಡೆಸುತ್ತಿರುವ ಬಿಜೆಪಿ, ದಲಿತರು, ಹಿಂದುಳಿದ ಸಮುದಾಯಗಳನ್ನು ಓಲೈಸಲು ಹಿಂದುಳಿದ ವರ್ಗದ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಚಿಂತನೆ ನಡೆಸಿದೆ.
ಬಿಹಾರ್ ಚುನಾವಣೆಯಲ್ಲಿ ಮಂಡಲ್ ಆಯೋಗದ ಮೀಸಲಾತಿ ಮತ್ತು ಜಾತಿ ಅಂಶಗಳು ಪ್ರಮುಖವಾಗಿ ಹೊರಹೊಮ್ಮಿವೆ. ಆದ್ದರಿಂದ, ಎನ್ಡಿಎ ಮೈತ್ರಿಕೂಟದಿಂದ ದಲಿತ, ಒಬಿಸಿ ಅಥವಾ ಇಬಿಸಿ ಸಮುದಾಯಕ್ಕೆ ಸೇರಿದ ವ್ಯಕ್ತಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಿಂಗ್ ತಿಳಿಸಿದ್ದಾರೆ.