ದೆಹಲಿ ಮಾತ್ರವಲ್ಲ ಡೆಹ್ರಾಡೂನ್ನಲ್ಲೂ ದೇಹದ ತುಂಡು ಎಸೆತ!

ಶನಿವಾರ, 19 ನವೆಂಬರ್ 2022 (07:41 IST)
ನವದೆಹಲಿ: ದೆಹಲಿಯಲ್ಲಿ ನಡೆದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಸ್ಫೋಟಕ ಮಾಹಿತಿ ಸಿಕ್ಕಿದೆ.
 
ಶ್ರದ್ಧಾ ದೇಹವನ್ನು ತುಂಡರಿದ್ದ ಸೈಕೋ ಪಾತಕಿ ಅಫ್ತಾಬ್ ಬರಿ ದೆಹಲಿಯ ಕಾಡುಗಳಲ್ಲಿ ಮಾತ್ರವಲ್ಲದೇ ಉತ್ತಾರಖಂಡನ ಡೆಹ್ರಾಡೂನ್ ನಲ್ಲೂ ಕೆಲವು ತುಂಡುಗಳನ್ನು ಎಸೆದು ಬಂದಿದ್ದಾನಂತೆ.

ಈ ನಡುವೆ ಶ್ರದ್ಧಾ ಸ್ನೇಹಿತರು ಹಂಚಿಕೊಂಡ ಚಾಟ್ಗಳು ವೈರಲ್ ಆಗಿದ್ದು, ಅಫ್ತಾಬ್ ಶ್ರದ್ಧಾಳನ್ನು ವರ್ಷಗಳಿಂದ ಹಿಂಸಿಸುತ್ತಿದ್ದದ್ದು ಬಹಿರಂಗವಾಗಿದೆ.

ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಮೊಗೆದಷ್ಟು ಸ್ಪೋಟಕ ಮಾಹಿತಿಗಳು ಹೊರ ಬರುತ್ತಿದೆ. ದೆಹಲಿ ಪೊಲೀಸರ ವಿಚಾರಣೆಯಲ್ಲಿ ಸೈಕೊ ಪಾತಕಿ ಅಫ್ತಾಬ್ ಸ್ಫೋಟಕ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದಾನೆ.

ಪೊಲೀಸ್ ಕಸ್ಟಡಿ ವಿಸ್ತರಣೆ ಬಳಿಕ ಪೊಲೀಸರು ಅಫ್ತಾಬ್ ವಿಚಾರಣೆ ಮುಂದುವರಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಸ್ಪೋಟಕ ಸತ್ಯವನ್ನು ಬಾಯಿ ಬಿಟ್ಟಿದ್ದಾನೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ