ಐಎನ್ ಎಕ್ಸ್ ಮೀಡಿಯಾ ಪ್ರಕರಣ; ಪಿ.ಚಿದಂಬರಂ ಗೆ ಇಂದು ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಮಂಗಳವಾರ, 22 ಅಕ್ಟೋಬರ್ 2019 (11:44 IST)
ನವದೆಹಲಿ : ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ.



ಈ ಪ್ರಕರಣದಡಿ ಸೆ. 5ರಂದು ಸಿಬಿಐ ಬಂಧನಕ್ಕೆ ಒಳಗಾಗಿ ತಿಹಾರ್ ಜೈಲು ಸೇರಿದ ಪಿ.ಚಿದಂಬರಂ ಅವರು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಲಾಗಿತ್ತು.

 

ಬಳಿಕ ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ನಡೆಸಿದ  ಸುಪ್ರೀಂ ಕೋರ್ಟ್ ಇದೀಗ ಅವರಿಗೆ ಜಾಮೀನು ಮಂಜೂರು ಮಾಡಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ