ಕೇರಳ, ತಮಿಳುನಾಡಿನಲ್ಲಿ ಓಖಿ ಚಂಡಮಾರುತದ ಅಬ್ಬರ

ಶುಕ್ರವಾರ, 1 ಡಿಸೆಂಬರ್ 2017 (09:24 IST)
ತಿರುವನಂತಪುರಂ: ಓಖಿ ಚಂಡಮಾರುತರ ಅಬ್ಬರಕ್ಕೆ ಕೇರಳ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು ಇದುವರೆಗೆ ಸುಮಾರು ಏಳು ಮಂದಿ ಪ್ರಾಣ ಕಳೆದುಕೊಂಡಿರುವುದಾಗಿ ವರದಿಯಾಗಿದೆ.
 

ತಿರುವನಂತಪುರ, ಶಬರಿಮಲೆ ಮುಂತಾದೆಡೆ ಬಿರಾಗಳಿಯಿಂದ ಕೂಡಿದ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಈ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ. ಬಿರುಗಾಳಿ ಹಿನ್ನಲೆಯಲ್ಲಿ ಇಂದು ಕೇರಳದ ಹಲವೆಡೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗುತ್ತಿದೆ. ನಿನ್ನೆಯಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಒಳನಾಡಿನಲ್ಲೂ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ