ಒಡಿಶಾ ರಾಜ್ಯಪಾಲರಿಗೆ ಎದೆನೋವು: ಆಸ್ಪತ್ರೆಗೆ ದಾಖಲು

ಶುಕ್ರವಾರ, 20 ಅಕ್ಟೋಬರ್ 2017 (17:47 IST)
ಒಡಿಶಾ: ರಾಜ್ಯಪಾಲ ಎಸ್‌.ಸಿ.ಜಮೀರ್‌ ಗೆ ಎದೆನೋವು ಕಾಣಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜಭವನದ ಮೂಲಗಳು ತಿಳಿಸಿವೆ.

ಜಮೀರ್‌ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆದರೂ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಹೃದ್ರೋಗ ತಜ್ಞ ಪಿ.ಕೆ.ಸಾಹು ಹೇಳಿದ್ದಾರೆ. ರಾಜ್ಯಪಾಲರ ಆರೋಗ್ಯದ ಬಗ್ಗೆ ಕಳವಳ ಪಡಬೇಕಿಲ್ಲ ಎಂದು ಹೇಳಿದ್ದಾರೆ.

ಜಮೀರ್‌ ಅವರು ಮಹಾರಾಷ್ಟ್ರ ಮತ್ತು ಗೋವಾದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈಶಾನ್ಯ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಚುನಾಯಿತರಾಗಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ