ಸಂಸತ್ತಿನಲ್ಲಿ ನೆರೆದ ವಿಪಕ್ಷಗಳ ದಂಡು

ಬುಧವಾರ, 28 ಜೂನ್ 2017 (12:38 IST)
ನವದೆಹಲಿ: ಇಂದು ಸಂಸತ್ ಭವನದಲ್ಲಿ ವಿಪಕ್ಷಗಳ ದಂಡೇ ನೆರೆದಿತ್ತು. ಅದಕ್ಕೆ ಕಾರಣ ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ ಮೀರಾ ಕುಮಾರ್ ನಾಮಪತ್ರ ಸಲ್ಲಿಸಿದ್ದು.

 
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಎನ್ ಸಿಪಿ ನಾಯಕ ಶರದ್ ಪವಾರ್ ಸೇರಿದಂತೆ ವಿಪಕ್ಷಗಳ ಒಕ್ಕೂಟದ ಎಲ್ಲಾ ಪ್ರಮುಖ ನಾಯಕರೂ ನಾಮಪತ್ರ ಸಲ್ಲಿಕೆ ಸಂದರ್ಭ ಮೀರಾ ಕುಮಾರ್ ಜತೆ ಉಪಸ್ಥಿತರಿದ್ದರು.

ಆದರೆ ವಿದೇಶದಲ್ಲಿರುವ ರಾಹುಲ್ ಗಾಂಧಿ ಗೈರಾಗಿದ್ದರು. ಆದರೂ ತಮ್ಮ ಪಕ್ಷದ ಅಭ್ಯರ್ಥಿಗೆ ಟ್ವಿಟರ್ ಮೂಲಕ ಬೆಂಬಲ ಸೂಚಿಸಿದ್ದಾರೆ. ಜುಲೈ 17 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ