ಮೋದಿ ಸಂಪುಟದ ಕೆಲ ಹಿರಿಯ ಸಚಿವರು ಸಭೆ ಸೇರಿ, ದಾದ್ರಿ ಹತ್ಯೆ, ಎಂಎಂ.ಕಲಬುರ್ಗಿ ಹತ್ಯೆ ಕುರಿತಂತೆ ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವ ಆರೋಪಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕಾಂಗ್ರೆಸ್, ಜೆಡಿಯು ಮತ್ತು ಸಿಪಿಐ(ಎಂ) ಪಕ್ಷಗಳು ಸದನದಲ್ಲಿ ಅಸಹಿಷ್ಣುತೆ ಬಗ್ಗೆ ಚರ್ಚೆ ನಡೆಸಲು ಸಭಾಪತಿಯವರಿಗೆ ಅವಕಾಶ ನೀಡುವಂತೆ ಮನವಿ ಮಾಡಿದೆ. ಜಿಎಸ್ಟಿ ಮಸೂದೆ ಬಗೆಗಿರುವ ಲೋಪದೋಷಗಳ ಬಗ್ಗೆ ಚರ್ಚಿಸಲಾಗುವುದು ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.