ಮಾಜಿ ಸಚಿವ ಪಿ ಚಿದಂಬರಂಗೆ ಜೈಲಾ? ಬೇಲಾ? ಕೆಲವೇ ಕ್ಷಣದಲ್ಲಿ ನಿರ್ಧಾರ

ಬುಧವಾರ, 4 ಡಿಸೆಂಬರ್ 2019 (10:43 IST)
ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧಿತರಾಗಿರುವ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಜಾಮೀನು ಅರ್ಜಿ ತೀರ್ಪು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ.


ಆಗಸ್ಟ್ 22 ರಂದು ಸಿಬಿಐ ಚಿದಂಬರಂ ಅವರನ್ನು ಬಂಧಿಸಿತ್ತು. ಆದರೆ ಇದುವರೆಗೆ ಅವರಿಗೆ ಜಾಮೀನು ಸಿಕ್ಕಿರಲಿಲ್ಲ. ಹೀಗಾಗಿ ಕಳೆದ ಎರಡು ತಿಂಗಳಿನಿಂದ ತಿಹಾರ್ ಜೈಲು ವಾಸ ಅನುಭವಿಸುತ್ತಿದ್ದಾರೆ.

ಇನ್ನು ಕೆಲವೇ ಕ್ಷಣದಲ್ಲಿ ಸುಪ್ರೀಂ ಕೋರ್ಟು ಚಿದಂಬರಂ ಜಾಮೀನು ಅರ್ಜಿ ವಿಚಾರಣೆಯ ತೀರ್ಪು ಪ್ರಕಟಿಸಲಿದೆ. ಈ ಮೂಲಕ ಚಿದಂಬರಂ ಜೈಲುವಾಸ ಅಂತ್ಯವಾಗುತ್ತದೋ, ಇಲ್ಲಾ ಇನ್ನೂ ಮುಂದುವರಿಯುತ್ತದಾ ಎಂದು ಗೊತ್ತಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ