ಪ್ರೀತಿ ನಿರಾಕರಿಸಿದ ಶಿಕ್ಷಕಿಯನ್ನೇ ಕೊಂದ ಪಾಗಲ್ ಪ್ರೇಮಿ

ಭಾನುವಾರ, 24 ಫೆಬ್ರವರಿ 2019 (12:19 IST)
ಚೆನ್ನೈ : ಪ್ರೀತಿ ನಿರಾಕರಿಸಿದ ಶಿಕ್ಷಕಿಯನ್ನು ಪ್ರಿಯಕರನೇ ಶಾಲೆಯ ಆವರಣದ  ಮುಂದೆಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.


ಎಸ್.ರಮ್ಯಾ(23) ಕೊಲೆಯಾದ ಶಿಕ್ಷಕಿ. ಈಕೆ ಕಡಲೂರಿನ ಪೆರಿಯಾರ್ ಆರ್ಟ್ಸ್ ಕಾಲೇಜಿನಿಂದ ಪದವಿ ಪಡೆದ ನಂತರ ಕುರಿಂಜಿಪಾಡಿನಲ್ಲಿರುವ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಕೆಗೆ ಊಮಂಗಲಂ ನಿವಾಸಿ ರಾಜಶೇಖರ್ ಎಂಬಾತ ಪ್ರೀತಿಸುವಂತೆ ಒತ್ತಾಯಿಸಿ ಹಿಂಬಾಲಿಸುತ್ತಿದ್ದನು. ಇದಕ್ಕೆ ಆಕೆ ನಿರಾಕರಿಸಿದ್ದಕ್ಕೆ ಕೋಪಗೊಂಡ ಆತ, ರಮ್ಯಾ ಶಾಲೆಯ ಆವರಣದ ಮುಂದೆ ನಿಂತಿದ್ದ ವೇಳೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ