Pahagram Terror Attack: ನಮಾಜ್ಗೂ ಮುನ್ನಾ ಓವೈಸಿ ಕಪ್ಪು ಪಟ್ಟಿ ಧರಿಸಿದ್ದೇಕೆ
ಗುರುವಾರ, ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಹಿನ್ನೆಲೆಯಲ್ಲಿ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ ಓವೈಸಿ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಕ್ಕೆ ಕರೆ ನೀಡಿದರು ಮತ್ತು ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿರುವುದನ್ನು ಶ್ಲಾಘಿಸಿದರು.
ಭದ್ರತೆ ಕುರಿತ ಸಂಪುಟ ಸಮಿತಿ ಬುಧವಾರ ಕೈಗೊಂಡ ನಿರ್ಧಾರಗಳನ್ನು ಅವರು ಶ್ಲಾಘಿಸಿದರು.
ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿರುವುದು ತುಂಬಾ ಒಳ್ಳೆಯದು ಆದರೆ ನೀರನ್ನು ಎಲ್ಲಿ ಇಡುತ್ತೇವೆ?... ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಬೆಂಬಲಿಸುತ್ತೇವೆ.. ಇದು ರಾಜಕೀಯ ವಿಷಯವಲ್ಲ ಎಂದರು.