ಫೆಬ್ರವರಿ 5ರಂದು ಕರಾಚಿ ಸಾಹಿತ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಖೇರ್ ಅವರನ್ನು ಆಮಂತ್ರಿಸಲಾಗಿತ್ತು. ಖೇರ್ ಅವರು ಸೇರಿದಂತೆ ಒಟ್ಟು 18 ಜನರು ಈ ಸಾಹಿತ್ಯೋತ್ಸವದಲ್ಲಿ ಪಾಲ್ಗೊಳ್ಳಲೆಂದು ವೀಸಾಗಾಗಿ ಅರ್ಜಿ ಸಲ್ಲಿಸಿದ್ದರು. 18 ಮಂದಿಯ ಪೈಕಿ 17 ಮಂದಿಗೆ ವೀಸಾ ನೀಡಲಾಗಿದ್ದು ತಮಗಷ್ಟೆ ವೀಸಾ ನೀಡಿಲ್ಲ ಎಂದು ಅನುಪಮ್ ಖೇರ್ ನಿರಾಶೆ ವ್ಯಕ್ತ ಪಡಿಸಿದ್ದಾರೆ.