ಭಾರತದ ಗಡಿಯಲ್ಲಿ ಯುದ್ಧ ಸಿದ್ಧತೆಯಲ್ಲಿ ತೊಡಗಿರುವ ಪಾಕಿಸ್ತಾನ
ಯುದ್ಧ ಸಾಮಗ್ರಿಗಳನ್ನು ಸಾಗಣೆ ಮಾಡಿರುವುದಲ್ಲದೆ, ತನ್ನ ಎಫ್-17 ಯುದ್ಧ ವಿಮಾನಗಳನ್ನೂ ಗಡಿಯಲ್ಲಿ ತಂದಿಳಿಸಲು ಸಿದ್ಧತೆ ನಡೆಸಿದೆ. ಪಾಕಿಸ್ತಾನದ ಈ ಹೆಜ್ಜೆಯಯನ್ನು ಭಾರತ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಈ ನಡುವೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವೈಮಾನಿಕ ಸಮೀಕ್ಷೆ ನಡೆಸಿ ಭದ್ರತಾ ಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ನಡುವೆ ಭಾರತ ಮತ್ತು ಪಾಕ್ ನಡುವೆ ಬಸ್, ರೈಲು ಸೇವೆ ರದ್ದಾಗಿದೆ. ಹೀಗಾಗಿ ಮತ್ತೆ ಉಭಯ ದೇಶಗಳ ನಡುವೆ ಯುದ್ಧದ ಕಾರ್ಮೋಡ ಕವಿದಿದೆ.