ದೇಶದಲ್ಲಿ ದಲಿತ ವಿದ್ಯಾರ್ಥಿಗಳ ಸ್ಥಿತಿ ಶೋಚನೀಯವಾಗಿದೆ. ದೌರ್ಜನ್ಯಕ್ಕೆ ತುತ್ತಾಗುತ್ತಿರುವ ಅವರಿಗೆ ರಕ್ಷಣೆ ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ. ರೋಹಿತ್ ಆತ್ಮಹತ್ಯೆಗೆ ಹೊರಗಿನಿಂದ ಪ್ರೇರೇಪಿಸಲಾಗಿತ್ತು. ಆತನ ಸಾವಿನಲ್ಲಿ ಕೇಂದ್ರದ ಇಬ್ಬರು ಸಚಿವರ ಪಾತ್ರವಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದು ಮಾಯಾವತಿ ಆಗ್ರಹಿಸಿದರು.