ಕಿರಣ್ ರಿಜಿಜು ಹಾಗೂ ನಿರ್ಮಲ್ ಸಿಂಗ್ ಜೂನ್ 24 ರಂದು ಲೇಹ್ನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಈ ವೇಳೆ ಏರ್ ಇಂಡಿಯಾ ವಿಮಾನದಲ್ಲಿ ಅವರಿಗೆ ಸೀಟ್ ಸಿಕ್ಕಿರಲಿಲ್ಲ. ಹೀಗಾಗಿ ವಿಮಾನದ ಸಿಬ್ಬಂದಿಗಳು ಮಗು ಸೇರಿ ಮೂವರನ್ನು ಬಲವಂತವಾಗಿ ಕೆಳಗಿಳಿಸಿ ಸಚಿವರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಆದರೆ ಸಿಂಗ್, ರಿಜಿಜು ಅವರನ್ನು ಸಮರ್ಥಿಸಿಕೊಂಡಿದ್ದು, ಸಚಿವರಿಗೆ ಝಡ್ ಪ್ಲಸ್ ಭದ್ರತೆ ಇದ್ದು, ಅವರಿಗೆ ಸೂಕ್ತ ರಕ್ಷಣೆ ಒದಗಿಸುವುದಕ್ಕಾಗಿ ಕೆಲವು ಪ್ರಯಾಣಿಕರನ್ನು ಕೆಳಗಿಳಿಸಬೇಕಾಯಿತು ಎಂದಿದ್ದಾರೆ.