ಪಾಕಿಸ್ತಾನವೇ ಭಾರತದ ವಿರುದ್ಧ ನಿರಂತರವಾಗಿ ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿರುವುದರಿಂದ ಪಾಕಿಸ್ತಾನದ ತನಿಖಾಧಿಕಾರಿಗಳು , ಭದ್ರತಾ ಅಧಿಕಾರಿಗಳಿಗೆ ಪಠಾನ್ಕೋಟ್ ದಾಳಿಯ ಬಗ್ಗೆ ತನಿಖೆ ನಡೆಸಲು ಮೋದಿ ಹೇಗೆ ಅನುಮತಿ ನೀಡಿದರು ಎಂದು ಪ್ರಶ್ನಿಸಿದ್ದಾರೆ.
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಭಾರತದ ಮೇಲಿನ ಉಗ್ರರ ದಾಳಿಗಳಿಗೆ ನೆರವು ನೀಡುತ್ತದೆ ಎಂದು ನಾವು ಹೇಳುತ್ತೇವೆ. ಇದೊಂದು ಪಾಕ್ ಪ್ರಾಯೋಜಿತ ಭಯೋತ್ಪಾದನೆ ಎನ್ನುವುದನ್ನು ಒಪ್ಪಿಕೊಳ್ಳುತ್ತೇವೆ. ಇದೀಗ ಪಾಕ್ ಅಧಿಕಾರಿಗಳನ್ನು ತನಿಖೆಗಾಗಿ ಭಾರತಕ್ಕೆ ಕರೆಸಿರುವುದು ನೋಡಿದಲ್ಲಿ ಪ್ರಧಾನಿ ಮೋದಿ ಪಾಕ್ಗೆ ಶರಣಾಗಿದ್ದಾರೆ ಎಂದು ಭಾವಿಸಬೇಕಾಗುವುದಾಗಿ ಕಳವಳ ವ್ಯಕ್ತಪಡಿಸಿದ್ದಾರೆ.