ಪೌರ ಕಾರ್ಮಿಕರಿಗೆ ಸರ್ಕಾರದ ಗುಡ್ ನ್ಯೂಸ್

ಸೋಮವಾರ, 4 ಜುಲೈ 2022 (15:00 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರು ಪೌರ ಕಾರ್ಮಿಕರಿಗೆ ಸರ್ಕಾರ ಅಲ್ಪ ಪ್ರಮಾಣದ ಗುಡ್ ನ್ಯೂಸ್ ಅನ್ನು ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆಯನ್ನು ನೀಡಲು ತೀರ್ಮಾನಿಸಿದೆ. 
ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆ ಎಂದು ಎರಡು ಸಾವಿರ ಪ್ರತಿ ತಿಂಗಳು ಕೊಡಲಾಗುವುದು. ಮೊದಲು ನಗರದಲ್ಲಿ ಬಿಬಿಎಂಪಿಯೇ ಕೊಡಬೇಕು ಅಂತ ಇತ್ತು. ಆದರೆ ಸಂಪುಟ ಸಭೆಯಲ್ಲಿ ಸರ್ಕಾರವೇ ಭರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ