ಅಮರನಾಥ ಯಾತ್ರಿಕರ ಮೇಲೆ ದಾಳಿ: ಪಿಡಿಪಿ ಶಾಸಕನ ಡ್ರೈವರ್ ಅರೆಸ್ಟ್

ಶನಿವಾರ, 15 ಜುಲೈ 2017 (12:10 IST)
ಶ್ರೀನಗರ: ಅಮರನಾಥ ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಪಿ ಶಾಸಕ ಏಜಾಜ್ ಅಹ್ಮದ್ ಅವರ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
 
ಬಂಧಿತ ಆರೋಪಿಯನ್ನು ಪುಲ್ವಾಮ ನಿವಾಸಿ ತೌಸೀಫ್ ಅಹ್ಮದ್ ಎಂದು ತಿಳಿದುಬಂದಿದೆ. ಭಯೋತ್ಪಾದಕರಿಗೆ ಮಾಹಿತಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಈತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
 
ಜು.10 ರಾತ್ರಿ 8.20 ಸುಮಾರಿಗೆ ಉಗ್ರರ ಗುಂಪೊಂದು ಅಮರನಾಥ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ ನಡೆಸಿತ್ತು.  ಈ ಘಟನೆಯಲ್ಲಿ 7 ಯಾತ್ರಿಗಳು ಸಾವನ್ನಪ್ಪಿದ್ದು, 12 ಯಾತ್ರಿಕರು ಗಾಯಗೊಂಡಿದ್ದರು. ದಾಳಿ ಪ್ರಕರಣವನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಯಾತ್ರಾರ್ಥಿಗಳಿದ್ದ ಬಸ್ ಹಾಗೂ ಅದು ಹೋಗುತ್ತಿದ್ದ ಮಾರ್ಗದ ಬಗ್ಗೆ ಉಗ್ರರಿಗೆ ಯಾರು ಮಾಹಿತಿ ನೀಡಿದ್ದರು, ಉಗ್ರರಿಗೆ ವಾಹನ ನೀಡಿದವರು ಯಾರು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 
 

ವೆಬ್ದುನಿಯಾವನ್ನು ಓದಿ