ಕಪ್ಪು ಹಣವನ್ನು ಮರಳಿ ತರಲು ವಿಫಲವಾಗಿರುವ ಬಿಜೆಪಿ ಸರಕಾರದ ವಿರುದ್ಧ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಭ್ರಷ್ಟಾಚಾರ ವಿರೋಧಿ ಚಳುವಳಿಗಾರ ಅಣ್ಣಾ ಹಜಾರೆ ಕಿಡಿಕಾರಿದ್ದಾರೆ. ಜನರಿಗೆ ವಂಚನೆ ಮಾಡಿರುವ ಮೋದಿ ಸರಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಣ್ಣಾ ಎಚ್ಚರಿಕೆ ನೀಡಿದ್ದಾರೆ.
ಸುದ್ದಿವಾಹಿನಿ ಒಂದಕ್ಕೆ ಸಂದರ್ಶನ ನೀಡುತ್ತಿದ್ದ ಅಣ್ಣಾ ತಮಗೆ ಸುಳ್ಳು ಭರವಸೆಗಳನ್ನು ನೀಡಲಾಗಿತ್ತು ಎಂದು ಜನರಿಗೆ ಈಗ ಅರಿವಾಗಿದೆ. ಕಾಂಗ್ರೆಸ್ಗೆ ಪಾಠ ಕಲಿಸಿದ ರೀತಿಯಲ್ಲಿಯೇ ಬಿಜೆಪಿಗೆ ನೇತೃತ್ವದ ಸರಕಾರಕ್ಕೆ ಕೂಡ ಅವರು ತಕ್ಕ ಪಾಠ ಕಲಿಸಲಿದ್ದಾರೆ. ಭೃಷ್ಟಾಚಾರದ ವಿರುದ್ಧ 2011ರಲ್ಲಿ ಚಳುವಳಿ ನಡೆಸಿದ ನಂತರ ಜನಸಾಮಾನ್ಯರು ಎಚ್ಚೆತ್ತುಕೊಂಡಿದ್ದಾರೆ ಎಂದು ಹೇಳಿದ್ದಾರೆ.