ಪ್ರದೀಪ್ ಭಲೇಕರ್ ಎನ್ನುವವರು ಈ ಅರ್ಜಿಯನ್ನು ಸಲ್ಲಿಸಿದ್ದು ಸಂಜಯ್ ದತ್ ಅವರಂತೆಯೇ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಬೇಕೆಂದರೆ ಅಂತಹ 27,740 ಮಂದಿ ಕೈದಿಗಳು ಜೈಲಿನಲ್ಲಿದ್ದಾರೆ. ಆದರೆ, ಸಂಜಯ್ ದತ್ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಅವರಿಗೆ ಮಾತ್ರ ಬಿಡುಗಡೆ ಭಾಗ್ಯವನ್ನು ನೀಡಲಾಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಹೈಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ಮುಂದಿನ ವಾರಕ್ಕೆ ಕಾದಿಟ್ಟಿದೆ.