ಮಂಗಳೂರಲ್ಲಿ ಪ್ರಧಾನಿ ಮೋದಿ ಉಪ್ಪಿಟ್ಟು ಸೇವಿಸಿದ್ರು ಮಾರಾಯ್ರೇ..!

ಮಂಗಳವಾರ, 19 ಡಿಸೆಂಬರ್ 2017 (08:37 IST)
ಮಂಗಳೂರು: ಓಖಿ ಚಂಡಮಾರುತ ಸಂತ್ರಸ್ತರನ್ನು ಭೇಟಿ ಮಾಡಲು ಕರಾವಳಿ ಮಂಗಳೂರಿಗೆ ಬಂದಿಳಿದಿರುವ ಪ್ರಧಾನಿ ಮೋದಿ ಕದ್ರಿ ಬಳಿಯ ಗೆಸ್ಟ್ ಹೌಸ್ ನಲ್ಲಿ ಉಳಿದುಕೊಂಡಿದ್ದಾರೆ.
 

ಬೆಳಗಿನ ಉಪಾಹಾರಕ್ಕೆ ರವಾ ಉಪ್ಪಿಟ್ಟು ಸೇವಿಸಿದ ಪ್ರಧಾನಿ ಮೋದಿ ನಂತರ ಸ್ಥಳೀಯರ ನಾಯಕರೊಂದಿಗೆ ಮಾತುಕತೆ ನಡೆಸಿ ಲಕ್ಷದ್ವೀಪ ಮತ್ತು ಕೇರಳ ಕರಾವಳಿಗೆ ಭೇಟಿ ನೀಡಲಿದ್ದಾರೆ.

ನಿನ್ನೆಯಷ್ಟೇ ಗುಜರಾತ್ ಚುನಾವಣೆ ಗೆದ್ದ ಸಂಭ್ರಮದಲ್ಲಿರುವ ಪ್ರಧಾನಿ ಮೋದಿ ಭೇಟಿ ಕರಾವಳಿ ಬಿಜೆಪಿ ನಾಯಕರ ಉತ್ಸಾಹ ಹೆಚ್ಚಿಸಿದೆ. ನಿನ್ನೆ ತಡರಾತ್ರಿ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಕಾರ್ಯಕರ್ತರ ಕೂಗು ಮುಗಿಲುಮುಟ್ಟಿತ್ತು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಂಗಾರ ಸೇರಿದಂತೆ ಬಿಜೆಪಿ ನಾಯಕರ ದಂಡೇ ಸೇರಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ