ಕರ್ನಾಟಕ ಸೇರಿದ ಆರು ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ

ಶುಕ್ರವಾರ, 16 ಜುಲೈ 2021 (09:51 IST)
ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ಮೂರನೇ ಅಲೆ ಏಳುವ ಅಪಾಯ ಎದುರಾಗಿರುವ ಬೆನ್ನಲ್ಲೇ ಕಾರ್ಯಪ್ರವೃತ್ತವಾಗಿರುವ ಕೇಂದ್ರ ಸರ್ಕಾರ ಅಗತ್ಯ ಸೌಲಭ್ಯಗಳ ಹೆಚ್ಚಳಕ್ಕೆ ಮುಂದಾಗಿದೆ.


ಈ ನಡುವೆ, ಇಂದು ಪ್ರಧಾನಿ ಮೋದಿ ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿದಂತೆ ಆರು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೊರೋನಾ ಎದುರಿಸುವ ಕುರಿತು ಮಹತ್ವದ ಸಭೆ ನಡೆಸಲಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯ ಮುಖ್ಯಮಂತ್ರಿಗಳು ಪ್ರಧಾನಿ ಜೊತೆಗೆ ಇಂದು 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಈ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚು ಕಂಡುಬರುವ ಹಿನ್ನಲೆಯಲ್ಲಿ ಅದನ್ನು ಎದುರಿಸುವ ಬಗೆ ಬಗ್ಗೆ ಸಭೆಯಲ್ಲಿ ಸಲಹೆ ಸೂಚನೆ ನೀಡುವ ಸಾಧ‍್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ