ಗೋ ಬ್ಯಾಕ್ ಮೋದಿ ಎಂದ ಕಾವೇರಿ ಹೋರಾಟಗಾರರಿಗೆ ಪ್ರಧಾನಿ ಮೋದಿ ಹೇಳಿದ್ದೇನು?!

ಶುಕ್ರವಾರ, 13 ಏಪ್ರಿಲ್ 2018 (09:03 IST)
ಚೆನ್ನೈ: ತಮಿಳುನಾಡಿನಲ್ಲಿ ಕಾವೇರಿ ಜಲಮಂಡಳಿ ರಚನೆಗೆ ಒತ್ತಾಯಿಸಿ ಪ್ರತಿಭಟನೆಯ ಕಾವು ತಾರಕಕ್ಕೇರಿದೆ. ಈ ಸಂದರ್ಭದಲ್ಲಿಯೇ ಚೆನ್ನೈಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಚೆನ್ನೈಗೆ ಬಂದ ಮೋದಿಗೆ ಪ್ರತಿಭಟನಾಕಾರರಿಂದ ಗೋ ಬ್ಯಾಕ್ ಮೋದಿ ಎಂಬ ಸ್ಲೋಗನ್ ನ ಸ್ವಾಗತ ಸಿಕ್ಕಿತು. ಕೆಲವರು ಕಪ್ಪು ಬಾವುಟ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ‘ತಮ್ಮ ಸರ್ಕಾರ ಯಾವುದೇ ರಾಜ್ಯ ಅಥವಾ ಪ್ರದೇಶದ ಬಗ್ಗೆ ತಾರತಮ್ಯ ನಡೆಸುತ್ತಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ ಕೆಲಸ ಮಾಡುತ್ತಿದ್ದೇವೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ