ಆಪ್ ಹಿಂದೆ ಬಿದ್ದ ಮೋದಿ: ಅರವಿಂದ್ ಕೇಜ್ರಿವಾಲ್ ಆರೋಪ

ಮಂಗಳವಾರ, 7 ಜೂನ್ 2022 (21:58 IST)

ಪ್ರಧಾನಿ ನರೇಂದ್ರ ಮೋದಿ ಆಮ್ ಆದ್ಮಿ ಪಕ್ಷ ಮತ್ತು ರಾಷ್ಟ್ರ ರಾಜಧಾನಿ ನವದೆಹಲಿ, ಪಂಜಾಬಿನಲ್ಲಿನ ಆಪ್ ಸರ್ಕಾರಗಳ ಹಿಂದೆ ಬಿದ್ದಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಆರೋಪಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ತನಿಖೆ ಭಾಗವಾಗಿ ಸಚಿವ ಸತ್ಯೇಂದ್ರ ಜೈನ್ ಅವರ ದೆಹಲಿ ನಿವಾಸದ ಮೇಲೆ ದಾಳಿ ನಡೆಸಿದ ನಂತರ 2.85 ಕೋಟಿ ನಗದು ಮತ್ತು 133 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಹೇಳಿಕೆ ನಂತರ ಕೇಜ್ರಿವಾಲ್ ರೀತಿ ಪ್ರತಿಕ್ರಿಯಿಸಿದ್ದಾರೆ. ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್, ಸತ್ಯೇಂದ್ರ ಜೈನ್ ವಿರುದ್ಧ ಆರೋಪ ಸುಳ್ಳು ಎಂದಿದ್ದಾರೆ.

ಸಂದರ್ಭದಲ್ಲಿ ಎಲ್ಲ ಬಲದೊಂದಿಗೆ ಪ್ರಧಾನಿ ಮೋದಿ ಆಪ್ ಪಕ್ಷ ಮತ್ತು ದೆಹಲಿ ಮತ್ತು ಪಂಜಾಬಿನ ಸರ್ಕಾರಗಳ ಹಿಂದೆ ಬಿದ್ದಿದ್ದಾರೆ. ಸುಳ್ಳಿನ ನಂತರ ಸುಳ್ಳು, ಸುಳ್ಳಿನ ನಂತರ ಸುಳ್ಳು ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ನೀವು( ಪ್ರಧಾನಿ) ಎಲ್ಲಾ ತನಿಖಾ ತಂಡಗಳ ಬಲವನ್ನು ಹೊಂದಿದ್ದೀರಿ ಆದರೆ, ದೇವರು ನಮ್ಮೊಂದಿಗೆ ಇದ್ದಾನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ