ಪ್ರಧಾನಿ ಮೋದಿ ಕುಂಭಕರ್ಣನಂತೆ ನಿದ್ರಾವಸ್ಥೆಯಲ್ಲಿದ್ದಾರೆ: ಮಾಯಾವತಿ

ಮಂಗಳವಾರ, 9 ಆಗಸ್ಟ್ 2016 (12:39 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ ಎರಡು ವರ್ಷಗಳಿಂದ ಕುಂಭಕರ್ಣನಂತೆ ನಿದ್ರಾವಸ್ಥೆಯಲ್ಲಿದ್ದು, ಇದೀಗ ಉತ್ತರಪ್ರದೇಶ ಚುನಾವಣೆ ಎದುರಾದ ಹಿನ್ನೆಲೆಯಲ್ಲಿ ದಲಿತರ ಪರ ಹೇಳಿಕೆ ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿ ಆರೋಪಿಸಿದ್ದಾರೆ.
 
ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯ ನಡೆದರೂ ಯಾವುದೇ ಹೇಳಿಕೆ ನೀಡದ ಮೋದಿ ಇದೀಗ ಉತ್ತರಪ್ರದೇಶ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ಗೋರಕ್ಷಣೆ ನೆಪದಲ್ಲಿ ದಲಿತರ ಮೇಲೆ ಪ್ರತಿನಿತ್ಯ ದೌರ್ಜನ್ಯಗಳು ನಡೆಯುತ್ತಿವೆ. ಆದರೆ, ದಲಿತರಿಗೆ ಯಾವುದೇ ರಕ್ಷಣೆ ದೊರೆಯುತ್ತಿಲ್ಲ. ಪ್ರಧಾನಿ ಮೋದಿ ಸರಕಾರದಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂದು ಗುಡುಗಿದ್ದಾರೆ.
 
ಗುಜರಾತ್‌ನಲ್ಲಿ ಮುಂದಿನ ವರ್ಷ ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಉನಾ ಜಿಲ್ಲೆಯಲ್ಲಿ ನಡೆದ ದಲಿತರ ಮೇಲಿನ ಹಲ್ಲೆಯಲ್ಲಿ ಖಂಡಿಸಿರುವ ಮೋದಿ, ದಲಿತರ ಮೇಲೆ ಹಲ್ಲೆ ನಡೆಸುವ ವ್ಯಕ್ತಿಗಳು ದೇಶದ್ರೋಹಿಗಳು ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ