ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ ಎರಡು ವರ್ಷಗಳಿಂದ ಕುಂಭಕರ್ಣನಂತೆ ನಿದ್ರಾವಸ್ಥೆಯಲ್ಲಿದ್ದು, ಇದೀಗ ಉತ್ತರಪ್ರದೇಶ ಚುನಾವಣೆ ಎದುರಾದ ಹಿನ್ನೆಲೆಯಲ್ಲಿ ದಲಿತರ ಪರ ಹೇಳಿಕೆ ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿ ಆರೋಪಿಸಿದ್ದಾರೆ.
ಗುಜರಾತ್ನಲ್ಲಿ ಮುಂದಿನ ವರ್ಷ ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಉನಾ ಜಿಲ್ಲೆಯಲ್ಲಿ ನಡೆದ ದಲಿತರ ಮೇಲಿನ ಹಲ್ಲೆಯಲ್ಲಿ ಖಂಡಿಸಿರುವ ಮೋದಿ, ದಲಿತರ ಮೇಲೆ ಹಲ್ಲೆ ನಡೆಸುವ ವ್ಯಕ್ತಿಗಳು ದೇಶದ್ರೋಹಿಗಳು ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿಕೆ ನೀಡಿದ್ದಾರೆ.