ದೆಹಲಿ ವಿಧಾನಸಭಾ ಚುನಾವಣೆಗಾಗಿ ರೋಡ್ ಶೋ ನಡೆಸುತ್ತ ಮಾತನಾಡುತ್ತಿದ್ದ ರಾಹುಲ್ ಗಾಂಧಿ, ಎನ್ಡಿಎ ಸರಕಾರ ಕಳೆದ ಮೇ ತಿಂಗಳಲ್ಲಿ ಅಧಿಕಾರಕ್ಕೇರಿತ್ತು. ಆದರೆ, ಪ್ರಧಾನಿ ಕೇವಲ ತಮ್ಮ ವೈಯಕ್ತಿಕ ಸಾರ್ವಜನಿಕ ಸಂಬಂಧಗಳನ್ನು ಕಟ್ಟಿಕೊಳ್ಳುವಲ್ಲಿ ತಲ್ಲೀನರಾಗಿದ್ದಾರೆ. ಅಭಿವೃದ್ಧಿಪರ ಕೆಲಸಗಳನ್ನು ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.