ಇಂದು ಮಾಜಿ ರಾಷ್ಟ್ರಪತಿ, ವಿಜ್ಞಾನಿ, ಭಾರತ ರತ್ನ ಎ.ಪಿ.ಜೆ ಅಬ್ದುಲ್ ಕಲಾಂ ಅವರ 85ನೇ ಜನ್ಮದಿನವಾಗಿದ್ದು, ದೇಶದ ಹೆಮ್ಮೆಯ ಪುತ್ರನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಗೌರವ ಸಮರ್ಪಿಸಿದ್ದಾರೆ.
ಮಿಸೈಲ್ ಮ್ಯಾನ್ ಆಫ್ ಇಂಡಿಯಾ (ಕ್ಷಿಪಣಿ ಜನಕ) ಎಂದು ಪ್ರಖ್ಯಾತರಾಗಿದ್ದ, ಕಲಾಂ ಪದ್ಮ ಭೂಷಣ(1981), ಪದ್ಮ ವಿಭೂಷಣ(1990), ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ(1997) ಸೇರಿದಂತೆ ಅನೇಕ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಜುಲೈ 25 2002ರಿಂದ ಜುಲೈ 25, 2007ರವರೆಗೆ ದೇಶದ ರಾಷ್ಟ್ರಪತಿಯಾಗಿ ಸೇವೆಸಲ್ಲಿಸಿದ್ದರು.