ಕಳೆದ ವಾರ ಪ್ರಧಾನಿ ಮೋದಿಯವರ ಭೇಟಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದರು. ಆದರೆ, ಪ್ರಧಾನಿಯವರು ಪೂರ್ವನಿಮಿತ್ಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಭೇಟಿಯಾಗಲು ಸಾಧ್ಯವಿಲ್ಲ ಎಂದು ಪ್ರಧಾನಮಂತ್ರಿ ಕಚೇರಿಯ ಅಧಿಕಾರಿಗಳು ತಳ್ಳಿಹಾಕಿದ್ದರು. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅಥವಾ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿಗೆ ಕೂಡಾ ಅವಕಾಶ ನೀಡಲಿಲ್ಲ ಎಂದು ಆಮ್ ಆದ್ನಿ ಆರೋಪಿಸಿದೆ.
ದೆಹಲಿಯ ಲೆಫ್ಟಿನೆಂಟ್ ಗೌವರ್ನರ್ ವಿವಾದ, ವಿದ್ಯುತ್ ಸಮಸ್ಯೆ ಸೇರಿದಂತೆ ಐದು ವಿಷಯಗಳ ಬಗ್ಗೆ ಚರ್ಚೆ ನಡೆಸಲು ಕಳೆದ 10 ದಿನಗಳ ಹಿಂದೆ ಕೇಜ್ರಿವಾಲ್ ಭೇಟಿಗಾಗಿ ಪತ್ರ ಬರೆದಿದ್ದರು. ಆದರೆ ಭೇಟಿಗೆ ನಿರಾಕರಿಸಲಾಗಿತ್ತು ಎಂದು ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.