ಲೋಕಸಭೆಯ ಸಭಾಪತಿ ಸುಮಿತ್ರಾ ಮಹಾಜನ್ ಅಮಾನತ್ತುಗೊಳಿಸಿದ ಪ್ರತಿಯೊಬ್ಬ ಸಂಸದನಿಗೆ ಕಾಂಗ್ರೆಸ್ ಪಕ್ಷ ಬೆಂಬಲವಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅಪರಾಧಿಗಳ ರಕ್ಷಣೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಡುಗಿದ್ದಾರೆ.
ಸಂಸದರನ್ನು ಅಮಾನತ್ತುಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್, ಟಿಎಂಸಿ, ಸಮಾಜವಾದಿ ಪಕ್ಷ ಸೇರಿದಂತೆ ಇತರ ವಿಪಕ್ಷಗಳು ಕಲಾಪವನ್ನು ಬಹಿರಷ್ಕರಿಸಿವೆ.