ವಿಹೆಚ್ಪಿ ನಾಯಕ ಅಶೋಕ್ ಸಿಂಘಾಲ್ ರಾಮ ಮಂದಿರ ನಿರ್ಮಾಣಕ್ಕೆ ಪಟ್ಟು ಹಿಡಿದಿರುವುದನ್ನು ಮತ್ತು ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರುವಂತೆ ಒತ್ತಾಯಿಸುತ್ತಿರುವುದು, ಉಳಿದ ಹಲವು ನಾಯಕರು ಈ ಕುರಿತು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದರೂ ಮೋದಿ ಅದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರುವ ಕುರಿತು ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ ಕಿಡಿಕಾರಿದ್ದಾರೆ.
"ಮೋದಿಯವರು ಅಧಿಕಾರವನ್ನು ಕೈಗೆತ್ತಿಕೊಂಡ 15 ತಿಂಗಳಲ್ಲಿ ಈ ರೀತಿಯ ವಾತಾವರಣ ಬೆಳೆಯುತ್ತಿದೆ. ಇದು ಕೀಳುಮಟ್ಟದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಬಿಹಾರ್ ಚುನಾವಣೆ ಸಮೀಪಿಸುತ್ತಿದ್ದಂತೆ ಇಂತಹ ಹೇಳಿಕೆಗಳು ಹೆಚ್ಚಾಗುತ್ತಿವೆ", ಎಂದು ಸಿಂಘ್ವಿ ಆರೋಪಿಸಿದ್ದಾರೆ.