ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಸಹಿಷ್ಣುತೆ ಕುರಿತಂತೆ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ನಾಯಕರು ಜನತೆಯ ಧ್ವನಿಯನ್ನು ಅಡಗಿಸಲು ಯತ್ನಿಸಿದಾಗ, ದಾದ್ರಿ ಹತ್ಯೆ ಘಟನೆ ನಡೆದಾಗ ಪ್ರಧಾನಿ ನರೇಂದ್ರ ಮೋದಿ ಯಾಕೆ ಮೌನವಾಗಿದ್ದರು ಎಂದು ಪ್ರಶ್ನಿಸಿದರು.
ದಾದ್ರಿ ಹತ್ಯೆ ಘಟನೆ ಪ್ರಸ್ತಾಪಿಸಿದ ರಾಹುಲ್, ಗೋಮಾಂಸ ಸೇವಸಿದ್ದಾನೆ ಎಂದು ಆರೋಪಿಸಿ ದಾದ್ರಿಯ ಮೊಹಮ್ಮದ್ ಅಖಲಖ್ ಎನ್ನುವ ಮುಸ್ಲಿಂ ವ್ಯಕ್ತಿಯ ಹತ್ಯೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರ ಕುಟುಂಬದವರೊಂದಿಗೆ ಸಂವಾದ ನಡೆಸಿ ಭಾರತ ಸುರಕ್ಷಿತವಾಗಿದೆ ಎನ್ನುವ ಭರವಸೆ ನೀಡಬೇಕಾಗಿರುವುದು ಅವರ ಕರ್ತವ್ಯವಾಗಿತ್ತು. ಆದರೆ, ಮೋದಿಯವರಿಗೆ ಸಮಯವಕಾಶವಿಲ್ಲ ಎಂದು ಲೇವಡಿ ಮಾಡಿದರು.