ಗಂಭೀರ ಸ್ಥಿತಿಯಲ್ಲಿರುವ ಯೋಧನನ್ನು ನವದೆಹಲಿಯ ಆರ್ಆರ್ ಸೇನಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ವಿಶೇಷ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಆಸ್ಪತ್ರೆಗೆ ಆಗಮಿಸಿದ್ದ ಮೋದಿಯವರು ಹನುಮಂತಪ್ಪ ಅವರ ಆತ್ಮಸ್ಥೈರ್ಯ ಮತ್ತು ಚೈತನ್ಯವನ್ನು ವಿವರಿಸಲು ಪದಗಳೇ ಸಿಗುತ್ತಿಲ್ಲ. ಅವರೊಬ್ಬ ಮಹೋನ್ನತ ಸೈನಿಕ. ಬಹುಬೇಗ ಚೇತರಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನಮಗಿದೆ. ಅವರು ಬೇಗ ಗುಣಮುಖರಾಗಲಿ.ಸಂಪೂರ್ಣ ದೇಶ ಅವರೊಂದಿಗಿದೆ ಎಂದು ಹೇಳಿದ್ದಾರೆ.