ಮ್ಯಾಗ್ಸೆಸ್ಸೆ ಫೌಂಡೇಶನ್ನಿಂದ 2015ರ ಮ್ಯಾಗ್ಸೆಸ್ಸೆ ಪ್ರಶಸ್ತಿ ಘೋಷಣೆಯಾದ ನಂತರ ಮಾತನಾಡಿದ ಚತುರ್ವೇದಿ, ಭ್ರಷ್ಟಾಚಾರ ಮತ್ತು ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪ್ರಧಾನಮಂತ್ರಿ ಕಚೇರಿ ಹಿಂದೇಟು ಹಾಕುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸಾಮಾಜಿಕ ಕಾರ್ಯಕರ್ತ ಅಂಶು ಗುಪ್ತಾ ಅವರಿಗೆ ಕೂಡಾ ಮ್ಯಾಗ್ಸೆಸ್ಸೆ ಪ್ರಶಸ್ತಿ ದೊರೆತಿದೆ.