ಶ್ರೀಕೃಷ್ಣ ಜನ್ಮಾಷ್ಠಮಿ ನೆಪದಲ್ಲಿ ವ್ಯಾಪಾರಿಗಳಿಂದ ಹಣ ಕಿತ್ತುಕೊಂಡ ಪೊಲೀಸರು!

ಗುರುವಾರ, 18 ಆಗಸ್ಟ್ 2022 (09:10 IST)
ಕಾನ್ಪುರ: ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಎಲ್ಲರೂ ಭಕ್ತಿಭಾವದಿಂದ ಆಚರಿಸುತ್ತಿದ್ದರೆ, ಉತ್ತರ ಪ್ರದೇಶದ ಕಾನ್ಪುರ ಪೊಲೀಸರು ಮಾತ್ರ ಕೃಷ್ಣ ಜನ್ಮಾಷ್ಠಮಿಯ ನೆಪದಲ್ಲಿ ಸುಲಿಗೆ ಮಾಡಿದ್ದಾರೆ.

ರೈಲ್ವೇ ನಿಲ್ದಾಣದಲ್ಲಿ ಅಂಗಡಿ ಇಟ್ಟುಕೊಂಡಿರುವ ವ್ಯಾಪಾರಿಗಳಿಗೆ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ದೇಣಿಗೆ ಎಂದು ರೈಲ್ವೇ ಪೊಲೀಸರು 2,100 ರೂ. ವಸೂಲಿ ಮಾಡಿದ್ದಾರೆ. ಇದಕ್ಕೆ ವಿಶೇಷ ರಸೀತಿಯನ್ನೂ ಮಾಡಿಸಿಕೊಂಡಿದ್ದು, ವ್ಯಾಪಾರಿಗಳಿಂದ ಸುಲಿಗೆ ಮಾಡಿದ್ದಾರೆ.

ಈ ಬಗ್ಗೆ ವ್ಯಾಪಾರಿಗಳು ಆರೋಪ ಮಾಡಿದ್ದು, ದೇವರ ಹೆಸರಲ್ಲಿ ಪೊಲೀಸರು ಸಾವಿರಾರು ರೂ. ಕಿತ್ತುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ