ಮಹಿಳೆಯ ಮರ್ಮಾಂಗಕ್ಕೆ ಬಿಯರ್ ಬಾಟಲ್, ಖಾರದ ಪುಡಿ ಹಾಕಿದನಾ ಪೊಲೀಸ್ ಅಧಿಕಾರಿ..!

ಮಂಗಳವಾರ, 9 ಮೇ 2017 (13:29 IST)
ದೆಹಲಿಯಲ್ಲಿ ನಡೆದ ನಿರ್ಭಯಾ ಗ್ಯಾಂಗ್ ರೇಪ್  ರೀತಿಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹಿಳೆ ಮೇಲೆ ಲೈಂಗಿಕ ಹಲ್ಲೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಕಣಚಕ್ ಪ್ರದೇಶದ ಮಹಿಳೆಯೊಬ್ಬರು ಪೊಲೀಸ್ ಅಧಿಕಾರಿ ವಿರುದ್ಧವೇ ಇಂಥದ್ದೊಂದು ಆರೋಪ ಮಾಡಿದ್ದಾರೆ.
 

ಠಾಣಾಧಿಕಾರಿ ರಾಕೇಶ್ ಶರ್ಮಾ ಬಲವಂತವಾಗಿ ನನ್ನ ಬಟ್ಟೆ ಬಿಚ್ಚಿಸಿ ಮರ್ಮಾಂಗಕ್ಕೆ ಬಿಯರ್ ಬಾಟಲ್ ಮತ್ತು ಖಾರದ ಪುಡಿ ಹಾಕಿ ಹಿಂಸೆ ನೀಡಿದ್ದಾರೆ ಎಂದು 25 ವರ್ಷದ ಮಹಿಳೆ ಆರೋಪಿಸಿದ್ದಾರೆ. ಮನೆಗೆಲಸ ಮಾಡುತ್ತಿದ್ದ ನಮ್ಮನ್ನ ಕೆಲ ದಿನಗಳ ಹಿಂದೆ ಬಂಧಿಸಿದ ಪೊಲೀಸರು ಸುಳ್ಳು ಆರೋಪ ಹೊರಿಸಿ ಒಂದು ವಾರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಹಲ್ಲೆ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣವನ್ನೇ ಹೋಲುತ್ತಿದೆ. ಪತ್ನಿಯನ್ನ ನೋಡಲು ಹೋದ ಪತಿಯನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ಮಹಿಳೆ ಪರ ವಕೀಲರು ಹೇಳಿದ್ದಾರೆ. ಮಹಿಲೆಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ.

ಘಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಪ್ರಧಾನಿ ಕಚೇರಿಯ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಕೂಡಲೇ ಕ್ರಮ ಜರುಗಿಸುವಂತೆ ಜಮ್ಮು ಸರ್ಕಾರವನ್ನ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ