ಸುಳ್ಳು ಸುದ್ದಿ ಹಬ್ಬಿಸಿದರೆ ಬೀಳುತ್ತೆ ಕೇಸ್

ಶನಿವಾರ, 12 ಫೆಬ್ರವರಿ 2022 (15:54 IST)
ಬೆಂಗಳೂರಿನ ಚಂದ್ರಾಲೇಔಟ್ ನಗರದ ಶಾಲೆಯೊಂದರ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದಿದ್ದು, ವಿದ್ಯಾರ್ಥಿಗಳ ಪ್ರವೇಶವನ್ನು ಶಿಕ್ಷಣ ಸಂಸ್ಥೆ ನಿರಾಕರಿಸಿದೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿಯೇ ಹಿಜಾಬ್ & ಕೇಸರಿ ಶಾಲು ಬಗ್ಗೆ ವದಂತಿ, ಸುಳ್ಳುಸುದ್ದಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ರೇ ಕಾನೂನು ಕ್ರಮ ಕೈಗೊಳ್ಳೋದಾಗಿ ಪೊಲೀಸ್ ಇಲಾಖೆ ಎಚ್ಚರಿಸಿದೆ.
ಹಾಗೂ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವಂತೆ ಮಾಡಿದ್ರೇ, ಅಂತವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಅಲ್ಲದೇ ರೌಡಿ ಶೀಟರ್ ಮತ್ತು ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ