ರಾಜಕೀಯ ಮುಖಂಡರು ಅಧಿಕಾರದ ಗದ್ದುಗೆ ಏರಿದ ಬಳಿಕ ತಮ್ಮನ್ನು ದೇವರೆಂದು ಪರಿಗಣಿಸುತ್ತಾರೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಕುಮಾರ್ ಸಿಸೋಡಿಯಾ ಹೇಳಿಕೆ ನೀಡಿದ್ದಾರೆ. ಹರ್ಯಾಣ ಮುಖ್ಯಮಂತ್ರಿ ಎಂ.ಎಲ್. ಕಟ್ಟಾರ್ ಅವರ ಬೆಂಗಾವಲು ವಾಹನಗಳು ಕರ್ನಾಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಚಾರಿಯೊಬ್ಬರ ಮೇಲೆ ಹರಿದು ಅವರು ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಸಿಸೋಡಿಯಾ ಹೇಳಿಕೆ ಹೊರಬಿದ್ದಿದೆ.