ಬಿಜೆಪಿ ಶಾಸಕ ಅಭಿಲಾಷ್ ತಿವಾರಿ, ಆದಿವಾಸಿ ಸಮುದಾಯಕ್ಕೆ ಸೇರಿದ ತರಕಾರಿ ಮಾರಾಟ ಮಾಡುವ ಮಹಿಳೆಯ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ವಾಗ್ದಾಳಿ ನಡೆಸಿದ್ದಲ್ಲದೇ ಆಕೆ ಮಾರಾಟ ಮಾಡುತ್ತಿದ್ದ ತರಕಾರಿಯನ್ನು ಕಾಲಿನಿಂದ ಒದೆಯುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.
ನಗರದ ಗೀಡಮ್ ಬಡಾವಣೆಯ ಪ್ರದೇಶದ ಪರಿಶೀಲನೆಗೆ ತೆರಳಿದ್ದ ಶಾಸಕ ಅಭಿಲಾಷ್, ರಸ್ತೆ ಬದಿ ತರಕಾರಿ ಮಾರಾಟ ಮಾಡುತ್ತಿದ್ದ ಆದಿವಾಸಿ ಮಹಿಳೆಯರನ್ನು ಕಂಡು ಆಕ್ರೋಶದಿಂದ ತರಕಾರಿಯನ್ನು ಒದ್ದು, ಮಹಿಳೆಯ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಬಿಜೆಪಿ ಶಾಸಕನ ವಿಡಿಯೋ ಇದೀಗ ವೈರಲ್ ಆಗಿದ್ದು, ಹಲವಾರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಭಾರಿ ಟೀಕೆಗಳು ಎದುರಾದ ಹಿನ್ನೆಲೆಯಲ್ಲಿ ಶಾಸಕ ಕ್ಷಮೆಯಾಚಿಸಿದ್ದಾನೆ. ಅಭಿಲಾಷ್ ಮಾಜಿ ಸಚಿವ ವಿಜಯ್ ತಿವಾರಿಯವರ ಪುತ್ರನಾಗಿದ್ದಾನೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.