ರಾಜೀನಾಮೆ ನೀಡಲು ನಿರ್ಧರಿಸಿದ ಪ್ರಜ್ವಲ್ ರೇವಣ್ಣ

ಶುಕ್ರವಾರ, 24 ಮೇ 2019 (12:16 IST)
ಹಾಸನ: ಲೋಕಸಭಾ ಚುನಾವಣೆಯಲ್ಲಿ ನೂತನ ಸಂಸದನಾಗಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರ ಸೋಲಿನಿಂದ ನೋವಾಗಿರುವುದಕ್ಕೆ ರಾಜೀನಾಮೆ ನೀಡುತ್ತಿರುವುದಕ್ಕೆ ಕಾರಣವಂತೆ.


 

ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಯಾರೂ ಬೇಜಾರು ಮಾಡಿಕೊಳ್ಳಬೇಡಿ. ನಾನು ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಅದನ್ನು ನಮ್ಮ ನಾಯಕರು ಎಷ್ಟರ ಮಟ್ಟಿಗೆ ಸ್ವೀಕರಿಸುತ್ತಾರೆ ಗೊತ್ತಿಲ್ಲ. ಯಾರಿಗೂ ಕೇಳದೆ ನಾನು ಇದನ್ನು ಮಾಡಿದೆ ಎಂದು ಹೇಳಬೇಡಿ. ಗೌಡರು ನಮ್ಮ ಪಕ್ಷದ ಬೇರು. ದೇವೇಗೌಡರ ಆಶೀರ್ವಾದದೊಂದಿಗೆ ನಾನು ರಾಜೀನಾಮೆ ಕೊಟ್ಟು ಗೌಡರಿಗೆ ಜಿಲ್ಲೆಯನ್ನು ಬಿಟ್ಟುಕೊಡುತ್ತೇನೆ. ಅವರ ಶಕ್ತಿ ರಾಜ್ಯಕ್ಕೆ ಬೇಕಿದೆ ಎಂದು ಹೇಳಿದರು.


ಪ್ರಜ್ವಲ್ ಅವರು ತಮಗೆ ಹಾಸನ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ದೇವೇಗೌಡರಿಗಾಗಿ ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಹಿರಿಯ ನಾಯಕರೊಂದಿಗೆ ಚರ್ಚಿಸಿ ಎಲ್ಲರೂ ಹೋಗಿ ದೇವೇಗೌಡರ ಮನವೊಲಿಸಲಾಗುವುದು ಎಂದು ಪ್ರಜ್ವಲ್ ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ