ಮಾಜಿ ಪ್ರಧಾನಿ ಜವಾಹರಲಾಲ್ ನೆಹರು 1964ರಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರೆ, ಸರ್ದಾರ್ ಪಟೇಲರು 1950ರಲ್ಲಿ ನಿಧನ ಹೊಂದಿದ್ದರು. ಆದರೆ, ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಜಾವ್ಡೇಕರ್ ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲವೆಬ್ಬಿಸಿದ್ದರೆ, ವಿಪಕ್ಷಗಳಿಗೆ ಸರಕಾರವನ್ನು ಹಣಿಯಲು ಹೊಸ ಅಸ್ತ್ರ ದೊರೆತಂತಾಗಿದೆ.