ನೆರೆಯ ರಾಜ್ಯ ಕೇರಳದಿಂದ ಇತ್ತೀಚಿಗೆ 17 ಜನ ನಾಪತ್ತೆಯಾಗಿದ್ದು, ಅವರೆಲ್ಲ ಅಪಾಯಕಾರಿ ಉಗ್ರ ಸಂಘಟನೆ ಐಸಿಸ್ ಸೇರಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಅದರಲ್ಲಿ ಒಬ್ಬ ಗರ್ಭಿಣಿಯೂ ಇದ್ದು ಆಕೆ ಮೂಲತಃ ಹಿಂದೂ ಧರ್ಮದವಳಾಗಿದ್ದು ಕ್ರಿಶ್ಚಿಯನ್ ಯುವಕನನ್ನು ಪ್ರೀತಿಸಿ ಮದುವೆಯಾಗಿ ಬಳಿಕ ಇಬ್ಬರು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದಾಳೆಂದು ಹೇಳಲಾಗುತ್ತಿದೆ. ತನ್ನ ಮಗಳು ನಾಪತ್ತೆಯಾಗಿದ್ದಾಳೆಂದು ಆಕೆಯ ಇಂದು ಕೇರಳ ಸಿಎಂ ಪಿನರಾಯಿ ವಿಜಯನ್ ಅವರನ್ನು ಭೇಟಿಯಾಗಿ ಈ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.